ವಚನ - 1258     
 
ಧರೆಯ ಮೇಲೊಂದು ಪಿರಿದಪ್ಪ ಸಂತೆಯ ನೆರವಿಗೆ ಬಂದವರನೇನೆಂಬೆನು! ಪರಿಪರಿಯ ಭಂಡದ ವ್ಯವಹಾರದೊಳಗೆ ಕೊಡಲಿಲ್ಲ, ಕೊಳಲಿಲ್ಲ. ವ್ಯಥಾ ವಿಳಾಸವಿದೇನೊ? ಅರೆಮರುಳೆಂಬ ಶಿವನು, ನೆರೆ ಮರುಳೆಂಬ ಜಗವ ಹುಟ್ಟಿಸಿದ ಪರಿಯ ಕಂಡು ಬೆರಗಾದೆ ಗುಹೇಶ್ವರಾ.