ವಚನ - 1269     
 
ನಟ್ಟಿರ್ದ ಬೆಟ್ಟಕ್ಕೆ ತಾಗು ತಡೆಯುಂಟೆ ಮರುಳೆ? ಆತುರದಲ್ಲಿ ಕಳವಳಿಸಿ, ವ್ಯಾಕುಳದಲ್ಲಿ ಕಳವಳಿಸುತಿಪ್ಪುದೀ ಮನವು. ಆ ಮನವು ಬೆನ್ನುದೋರದ ಮೊದಲೆ ಘನವ ಬೆಂಬತ್ತಿ ಬಿಡದಿರಬಲ್ಲಡೆ ತನ್ನಲ್ಲಿ ತನ್ಮೂರ್ತಿ ಗುಹೇಶ್ವರನಯ್ಯಾ.