ವಚನ - 1304     
 
ನೀರು ಕ್ಷೀರದಂತೆ ಕೂಡಿದ ಭೇದವ, ಆರಿಗೂ ಹೇಳಲಿಲ್ಲ, ಕೇಳಲಿಲ್ಲ. ಬೆಳುಗಾರ ಬೆರಸಿ ಬೆಚ್ಚ ಬಂಗಾರಕ್ಕೆ ಸಂದುಂಟೆ ಹೇಳಾ? ಉರಿಯುಂಡ ಕರ್ಪುರದ ಪರಿಯಂತಿರ್ದುದನು, ಇದಿರಿಂಗೆ ಕೊಂಡಾಡಿ ಹೇಳಲುಂಟೆ? ಅದಂತಿರಲಿ, ನಮ್ಮ ಗುಹೇಶ್ವರಲಿಂಗದ ಕಣ್ಣಮುಂದೆ, ನಿಮ್ಮ ಧರ್ಮದಿಂದಲೊಂದು ಆಶ್ಚರ್ಯವ ಕಂಡು ಬದುಕಿದೆನು ಕಾಣಾ ಸಂಗನಬಸವಣ್ಣಾ.