ವಚನ - 1306     
 
ನೀರೊಳಗೆ ಚಿತ್ರವ ಬರೆದಡೆ ಅದಾರ ಕಣ್ಣಿಗೆ ಕಾಣಬಹುದು? ಒಡಲು ಬರಿಯ ಬಯಲು ಬೊಮ್ಮವ ನುಡಿವಲ್ಲಿ ಆ ಬೊಮ್ಮದ ಮಾತದೆಲ್ಲಿ ಬಿದ್ದಿತ್ತು? ಅದು ಸಾಕಾರದೊಡಲುಗೊಂಡು ನುಡಿಯಿತ್ತು. ಆ ಉಭಯವನರಿದು ಅಡಗುವನ್ನಕ್ಕ ನಮ್ಮ ಗುಹೇಶ್ವರಲಿಂಗವೆಂಬ ಕುರುಹು ಬೇಕು ಕಾಣಾ ಎಲೆ ಅಂಬಿಗರ ಚೌಡಯ್ಯ.