ವಚನ - 1334     
 
ಪರುಷವಾದರೂ ಒಂದರಲ್ಲಿ ಇರಿಸಬೇಕು. ರತ್ನವಿಶೇಷವಾದಡೂ ಕುಂದಣದಲ್ಲಿ ಬಂಧಿಸಿ ಸಂಧಿಸಬೇಕು. ಲಿಂಗವ ಹಿಡಿದಲ್ಲಿ ಪೂಜಿಸುವ ಅಂಗವಿರಬೇಕು. ಇದು ಕಾರಣ, ಗುಹೇಶ್ವರಲಿಂಗವನರಿದು ಪೂಜೆಯ ಮರೆದಿರಲಾಗದು ಮರೆಯಲಿಲ್ಲ ಕಾಣಾ ಚಂದಯ್ಯಾ