ವಚನ - 1383     
 
ಬೆಳಗಿನೊಳಗೊಂದು ಬೆಳಗು ದೊರೆಕೊಂಡಡೆ ಮತ್ತೊಂದು ಬೆಳಗು ಮತ್ತೆಲ್ಲಿಯದೊ? ಘನದೊಳಗೊಂದು ಘನವು ದೊರೆಕೊಂಡಡೆ ಮತ್ತೊಂದು ಘನವು ಮತ್ತೆಲ್ಲಿಯದೊ? ಸಮೀಪನ ಮೇಲೆ ಸಮೀಪ ದಾಳಿವರಿದನು. ಗುಹೇಶ್ವರನ ಶರಣ ಚೆನ್ನಬಸವಣ್ಣನು!