ವಚನ - 1388     
 
ಬ್ರಹ್ಮ ವಿಷ್ಣುಗಳ ಮಾಯೆ ತೊತ್ತಳದುಳಿವಂದು, ರುದ್ರಗಣ ಪ್ರಮಥಗಣಂಗಳೆಂಬವರ ಮಾಯೆ ಮರುಳ್ಮಾಡಿ ಕಾಡುವಂದು, ನೊಸಲ ಕಣ್ಣು ಪಂಚಮುಖ ದಶಭುಜದವರಿಗೆ ಮಾಯೆ ಅರ್ಧಾಂಗಿಯಾದಂದು, ದೇವದಾನವರ ಮಾಯೆ ಅಗಿದಗಿದು ತಿಂಬಂದು, ಅಷ್ಟಾಶೀತಿಸಹಸ್ರ ಋಷಿಗಳ ಮಾಯೆ, ತಪೋಮದದಲ್ಲಿ ಕೆಡಹುವಂದು ನಾನು ಮಾಯಾಕೊಲಾಹಲ ನಾಗಿರ್ದೆ ಕಾಣಾ ಗುಹೇಶ್ವರಾ.