ವಚನ - 1389     
 
ಬ್ರಹ್ಮ ವಿಷ್ಣು ರುದ್ರ ಈಶ್ವರ ಸದಾಶಿವ ಪರಮೇಶ್ವರರೆಂಬ ಸಂದಣಿ ತಲೆದೋರದ ಮುನ್ನ-ಅಲ್ಲಿಂದತ್ತ ಬಯಲೆ ಬಲಿದು ಸ್ವರೂಪವಾಯಿತ್ತು. ಆ ಸ್ವರೂಪಿನ ಘನತೆಯ ಉಪಮಿಸಬಾರದು. ನೋಡಬಾರದ ಬೆಳಗು, ಕೂಡಬಾರದ ಮೂರ್ತಿ, ಅಖಂಡ ಅಪ್ರತಿಮ ನಮ್ಮ ಗುಹೇಶ್ವರಲಿಂಗದ ಬೆಳಗಿನ ಮೂಲವ ಲಿಂಗಸಂಗಿಗಳಲ್ಲದೆ ಮಿಕ್ಕಿನ ಅಂಗವಿಕಾರಿಗಳೆತ್ತ ಬಲ್ಲರೊ?