ವಚನ - 1426     
 
ಮನ ಮನ ಒಂದಾಗಿ ತನು ತನು ಒಂದಾಗಿ ಬೆರಸಿದ ಬಳಿಕ, ಕರೆಯಲಿಲ್ಲ ಕಾಲುವಿಡಿಯಲಿಲ್ಲ ಎಂದು ಅರಿದವರು, ಉಪಚರಿಸಿ ಬರಹೇಳಿದಡೆ ಅದೆ ಕೊರತೆ ನೋಡಾ! ಅಂಗದ ಕೈಯಲ್ಲಿ ಕ್ರೀ ಇರಲು ಮಾತಿನಲ್ಲಿ ಅದ್ವೈತವೆಂತಪ್ಪುದೊ? ಆಗಾಗದ ಮುನ್ನವೆ ತಾನಾದೆನೆಂಬವರಲ್ಲಿಗೆ ನಮ್ಮ ಗುಹೇಶ್ವರಲಿಂಗವು ಅಡಿಯಿಡುವನಲ್ಲ.