ವಚನ - 1427     
 
ಮನ ಮನ ಬೆರಸಿದವರೆಂತಿಪ್ಪರಂತಿಪ್ಪರು. ಅವರ ಪರಿಯನರಿಯಬಾರದು ಕೇಳಾ. ಇದಿರಿಚ್ಛೆಯರಿಯದಿಪ್ಪರು. ಒಳಗೆ ನೋಡಿದರೆ ಬಟ್ಟಬಯಲಲ್ಲಿಪ್ಪರು. ಗುಹೇಶ್ವರನ ಶರಣರು ತಾವಿಲ್ಲದ ಮಹಿಮರೆಂಬುದ ನಿನ್ನಿಂದಲರಿದೆ ನೋಡಾ ಸಿದ್ಧರಾಮಯ್ಯಾ.