ವಚನ - 1433     
 
ಮನಸುಖವನರಿಯನಾಗಿ ಲಿಂಗವೆಂದರಿದನು. ಧನಸುಖವನರಿಯನಾಗಿ ಜಂಗಮವೆಂದರಿದನು. ತನುಸುಖವನರಿಯನಾಗಿ ಪ್ರಸಾದವೆಂದರಿದನು. ಗುಹೇಶ್ವರಾ, ನಿಮ್ಮ ಶರಣ ಸಂಗನಬಸವಣ್ಣ ಸ್ವಯಲಿಂಗವಾದ ಕಾರಣ.