ವಚನ - 1446     
 
ಮುಕ್ತಿಗೆ ಮುಖವಾಗಿ ಯುಕ್ತಿಗೆ ಹೊರಗಾಗಿ ಅರಿವಿಂಗೆ ಅರಿವಾಗಿಪ್ಪ ಭೇದವು ಎನಗೆ ಕಾಣಬಂದಿತ್ತು ನೋಡಾ. ನಿನ್ನ ಒಳಗಾನೊರೆದು ನೋಡಿದಡೆ, ಒರೆದೊರೆಯಿಲ್ಲದ ಚಿನ್ನದ ಪರಿಮಳ ಎನ್ನ ಮನವನಾವರಿಸಿ ಪರಮಸುಖದ ಪರಿಣಾಮವನು ಒಳಕೊಂಡಿತ್ತು ನೋಡಾ. ಈ ಕುರುಹಿನ ಮೊಳೆಯ ಬರಿಯ ಬಯಲಲ್ಲಿ ನಿಲಿಸಿ ನಿಲವ ನೋಡಿ ಕೂಡಾ, ನಮ್ಮ ಗುಹೇಶ್ವರನ ಶರಣ ಅಜಗಣ್ಣನೊಳಗೆ ನೀನು ನಿರಾಳಸಂಗಿಯಾಗಿ.