ವಚನ - 1458     
 
ಯುಕ್ತಿಯ ಕೇಳಿದಡೆ ಭಕ್ತಿಯ ತೋರಿದ. ಭಕ್ತಿಯ ಕೇಳಿದಡೆ ಯುಕ್ತಿಯ ತೋರಿದ. ನಿತ್ಯವ ಬೆಸಗೊಂಡಡೆ ಅತ್ತತ್ತಲೋಸರಿಸಿದ. ಗುಹೇಶ್ವರನ ಶರಣ ಬಸವಣ್ಣ, ಮರೆಗೆ ಮರೆಯನೊಡ್ಡಿ ಜಾರಿದನು. ಬಸವಣ್ಣನ ಪರಿ ಎಂತು ಹೇಳಾ, ಮಡಿವಾಳ ಮಾಚಯ್ಯಾ.