ವಚನ - 151     
 
ಅನಲನಾರಣ್ಯದೊಳಗೆ ಎದ್ದಲ್ಲಿ; ದೂರದೆಡೆಯಲಾರನೂ ಕಾಣೆವು, ಸಂಗ್ರಾಮಧೀರರೆಲ್ಲರೂ ನೆಲೆಗೆಟ್ಟರಾಗಿ! ಮಾಯಾಮಂಜಿನ ಕೋಟೆಗೆ, ರಂಜನೆಯ ಕೊತ್ತಳ, ಅಂಜನೆಯ [ಅ]ಟ್ಟಳೆ. ಗುಹೇಶ್ವರನು ಶರಣ ಐಕ್ಯಸ್ಥಲವ ಮೆಟ್ಟಲೊಡನೆ, ಸರ್ವವೂ ಸಾಧ್ಯವಾಯಿತ್ತು.