ವಚನ - 1516     
 
ಶರಣನ ಒಡಲುಗೊಂಡ ಅಖಂಡಿತಲಿಂಗಕ್ಕೆ ಅರ್ಚನೆಯಿಲ್ಲ, ಶರಣನ ಒಡಲುಗೊಂಡ ಅಚಲಿತಲಿಂಗಕ್ಕೆ ಅರ್ಪಿತವಿಲ್ಲ, ಶರಣನ ಒಡಲುಗೊಂಡ ಅನುಪಮಲಿಂಗಕ್ಕೆ ಅವಧಾನವಿಲ್ಲ. ಅದೇನು ಕಾರಣವೆಂದಡೆ: ಶರಣನಿಂದಾದ ಆರ್ಚನೆ, ಶರಣನಿಂದಾದ ಅರ್ಪಿತ, ಶರಣನಿಂದಾದ ಅವಧಾನ. ಇದು ಕಾರಣ, ಸಂದಳಿದು ಲಿಂಗವಾದ ಮತ್ತೆ ಆನಂದವಲ್ಲದೆ ಅಣುಮಾತ್ರ ಕ್ರೀಯಿಲ್ಲ ಕಾಣಾ ಗುಹೇಶ್ವರಾ.