ವಚನ - 156     
 
ಖೇಚರಪವನದಂತೆ ಜಾತಿಯೋಗಿಯ ನಿಲುವು! ಮಾತಿನೊಳು ಧಾತು ನುಂಗಿ ಉಗುಳದಿನ್ನೆಂತೊ? ಭೂಚಕ್ರವಳಯವನು ಆಚಾರ್ಯ ರಚಿಸಿದ. ಗ್ರಾಮವೆಲ್ಲವ ಸುಟ್ಟು, ನೇಮ ನೆಲಗತವಾಗಿ, ನೇಮ ನಾಮವ ನುಂಗಿ ಗ್ರಾಮದ ಪ್ರಭುವನೆ ನುಂಗಿ, `ಗುಹೇಶ್ವರ ಗುಹೇಶ್ವರ' ಎನುತ ನಿರ್ವಯಲಾಗಿತ್ತು.