ವಚನ - 1607     
 
ಹೆಸರು ಹಾಲಯ್ಯ ಎರೆದುಂಬುದಂಬಿಲ' ಎಂಬ ಲೋಕದ ಗಾದೆಯ ಮಾತು ದಿಟವಾಯಿತ್ತಲ್ಲಾ! ಮಾತು ಕಲಿತು ಮಂಡೆಯ ಬೋಳಿಸಿಕೊಂಡು ಊರ ಮಾರಿಯ ಮರನೇರಿದಂತೆ ಮಾಯೆಯೆ ಕೊರಳಲ್ಲಿ ಕಟ್ಟಿಕೊಂಡು, ಘಟಸರಣಿಯ ಪಶುಗಳು ಜಂಗಮವೆಂದು ಸುಳಿವ ನಾಚಿಕೆಯ ನೋಡಾ ಗುಹೇಶ್ವರಾ.