ವಚನ - 1611     
 
ಹೊರಗಾಡಿ ಬಂದೆನೆಂದು ನುಡಿಸಲೊಲ್ಲದೆ ಸುಮ್ಮನಿದ್ದೆನು. ಎನ್ನ ಮನ ನೊಂದು ತಾಗಿದಡೆ ನಿಮ್ಮತ್ತ ಮುಂದಾದೆನು. ಬಿಕ್ಕುತ್ತ ಬೆದರುತ್ತ ಕಾಲಮೇಲೆ ಬಿದ್ದಡೆ, ಕಂಗಳ ಉದಕ ಮಜ್ಜನಕ್ಕೆರೆದಂತಾಯಿತ್ತು! ಅಂತಿರ್ದಡೆ ಕಂಡು ನೆಗಹಿದನು ನಮ್ಮ ಗುಹೇಶ್ವರಲಿಂಗವು.