ವಚನ - 171     
 
ಮನಬೀಸರವೆಂಬ ಗಾಳಿ ಬೀಸಿತ್ತು, ವಿದ್ಯಾಮುಖದ ಜ್ಯೋತಿ ನಂದಿತ್ತು. ಕತ್ತಲೆಯಲ್ಲಿ ಗತಿಯ ಕಾಣದೆ ದುಮ್ಮಾನ ನೆಲೆಗೊಂಡಿತ್ತು. ಸುಮ್ಮಾನ ಹೋಯಿತ್ತು. ಸಕಳಕಲಾವಿದ್ಯಾಗುರುವಲ್ಲಾ! ಮತಿತಾಳವೆಂಬ ಗುಹ್ಯತಾಗಿ, ಸುತಾಳವೆಂಬ ಶರಣಸಂಗದಲ್ಲಿ ಬಿದ್ದು, ಗುರುವಿಂಗೆ ಪ್ರಸಾದವಾದುದು, ಶಿಷ್ಯಂಗೆ ಓಗರವಾದುದು ನೋಡಾ! ಲೌಕಿಕ ನಾಯಕನರಕ! ಅರ್ಪಿತಮುಖವನರಿಯದೆ, ಅನರ್ಪಿತಮುಖವಾಯಿತ್ತು ಗುಹೇಶ್ವರಾ.