ವಚನ - 199     
 
ಪೃಥ್ವಿ ಅಪ್ಪು ತೇಜ ವಾಯು ಆಕಾಶ ಪಂಚಭೌತಿಕ, ಮನೋಬುದ್ಧಿ ಚಿತ್ತ ಅಹಂಕಾರ ಚತುಷ್ಟಯ ಕರಣಂಗಳು, ಸತ್ವ ರಜ ತಮದಲ್ಲಿ-ಆತ್ಮನ ಎತ್ತಲೆಂದರಿಯರು! ಇದನರಿದಡೆ, ಸಮತೆ ಸದಾಚಾರ ಆಶ್ರಮಸ್ಥಾನಕ ಸಹಸ್ರದಳಕಮಲದಲ್ಲಿ ಗುಹೇಶ್ವರಲಿಂಗವು.