ವಚನ - 209     
 
ಪೃಥ್ವಿಗೆ ಹುಟ್ಟಿದ ಶಿಲೆ, ಕಲುಕುಟಿಗಂಗೆ ಹುಟ್ಟಿದ ಮೂರುತಿ, ಗುರು ಮಂತ್ರಕ್ಕೆ ಲಿಂಗವಾಯಿತ್ತಲ್ಲಾ! ಈ ಮೂವರಿಗೆ ಹುಟ್ಟಿದ ಮಗನ ಲಿಂಗವೆಂದು ಕೈವಿಡಿವ, ಅಚ್ಚವ್ರತಗೇಡಿಗಳನೇನೆಂಬೆ ಗುಹೇಶ್ವರಾ.