ವಚನ - 25     
 
ಚಂದ್ರಮನೊಳಗಣ ಎರಳೆಯ ನುಂಗಿದ ರಾಹುವಿನ ನೋಟವು, ಅಂದಂದಿಗೆ ಬಂದು ಕಾಡಿತ್ತು ನೋಡಾ. ಒಂದರ ತಲೆ, ಒಂದರ ಬಸುರು, ಅಂದಂದಿಗೆ ಬಂದು ಕಾಡಿತ್ತು ನೋಡಾ. ನಂದಿ ನಂದಿಯ ನುಂಗಿ ಬಂದುದು ಮಹೀತಳಕ್ಕಾಗಿ, ಇಂದು, ರವಿಗಡಣವ ನಾನೇನೆಂಬೆ ಗುಹೇಶ್ವರಾ.