ವಚನ - 264     
 
ನಿರಾಳವೆಂಬ ಕೂಸಿಂಗೆ ಬೆಣ್ಣೆಯನಿಕ್ಕಿ, ಹೆಸರಿಟ್ಟು ಕರೆದವರಾರೊ? ಅಕಟಕಟಾ ಶಬ್ಧದ ಲಜ್ಜೆ[ಯ] ನೋಡಾ! ಗುಹೇಶ್ವರನರಿಯದ ಅನುಭಾವಿಗಳೆಲ್ಲರ ತರಕಟ ಕಾಡಿತ್ತು.