ವಚನ - 275     
 
ಪ್ರಾಣಲಿಂಗ ಪರಾಪರವೆಂದರಿದು, ಅಣು ರೇಣು ತೃಣ ಕಾಷ್ಠದಲ್ಲಿ ಕೂಡಿ ಪರಿಪೂರ್ಣಶಿವನೆಂದರಿದು, ಇಂತು, ಕ್ಷಣವೇದಿ ಅಂತರಂಗವ ವೇಧಿಸಲ್ಕೆ ಅಗಣಿತ ಅಕ್ಷೇಶ್ವರ ತಾನೆಂದರಿದು ಪ್ರಣವಪ್ರಭೆಯ ಮೇಲಣ ಪರಂಜ್ಯೋತಿ ತಾನೆಂದರಿದ ಕಾರಣ, ಗುಹೇಶ್ವರಾ, ನಿಮ್ಮ ಶರಣನುಪಮಾತೀತನು.