ವಚನ - 314     
 
ನೇಮಸ್ತನರಿವು ಪ್ರಪಂಚಿನಲ್ಲಿ ಹೋಯಿತ್ತು. ಭಕ್ತನ ಅರಿವು ಸಮಾಧಾನದಲ್ಲಿ ಹೋಯಿತ್ತು. ಜಂಗಮದ ಅರಿವು ಬೇಡಿದಲ್ಲಿ ಹೋಯಿತ್ತು. ಇಂತು ಕ್ರಿಯಾಗಮದೊಳಗೆ ಅವಂಗವೂ ಇಲ್ಲ. ಗುಹೇಶ್ವರಾ ನಿಮ್ಮ ಶರಣರಪೂರ್ವ.