ವಚನ - 319     
 
ಅಂಬರದೊಳಗೊಂದು ಅಡವಿ ಹುಟ್ಟಿತ್ತು. ಆ ಅಡವಿಯೊಳಗೊಬ್ಬ ವ್ಯಾಧನೈದಾನೆ. ಆ ವ್ಯಾಧನ ಕೈಯಲ್ಲಿ ಸಿಕ್ಕಿತ್ತು ಒಂದು ಮೃಗವು. ಆ ಮೃಗವ ಕೊಂದಲ್ಲದೆ ವ್ಯಾಧ ಸಾಯನು! ಅರಿವು ಬರಿದುಂಟೆ ಗುಹೇಶ್ವರಾ?