ವಚನ - 328     
 
ಹಾಳೂರೊಳಗೊಂದು ಮನೆಯ ಮಾಡಿ ಬದುಕ ಹೋದಡೆ, ಕಾಳೊರಗ ಬಂದು ಕಡಿಯಿತ್ತು ನೋಡಾ! ಕೇರಿ ಕೇರಿಯೊಳಗೆಲ್ಲಾ ಹರಿದಾಡುತ್ತಿದ್ದವು, ಮಾರಿಯ ತೋರದ ಮದಗಜಂಗಳು. ಚಿತ್ರಗುಪ್ತನ ಕೈಯ ಚಿತ್ರವ ತಿಳಿದು ನೋಡಿದಡೆ, ಹಾಳೂರು ಹಾಳಾಯಿತ್ತು ಗುಹೇಶ್ವರಾ.