ವಚನ - 331     
 
ಧರೆಯ ಮೇಲೊಂದು ಅರಿದಪ್ಪ ರತ್ನ ಹುಟ್ಟಿರಲು, ಅದನರಸಲರಸ ಹೋಯಿತ್ತಯ್ಯಾ. ನಡುನೀರೊಳಗೆ ಮುಳುಗಿ, ಆಳವರಿದು ನೋಡಿ, ಕಂಡೆಹೆನೆಂದಡೆ ಕಾಣಬಾರದು. ಧಾರೆವಟ್ಟಲ ಕಳೆದುಕೊಂಡು ನೀರ ಶೋಧಿಸಿ ನೋಡಿದಡೆ ದೂರದಲ್ಲಿ ಕಾಣಬರುತ್ತಿಹುದು ನೋಡಾ. ಸಾರಕ್ಕೆ ಹೋಗಿ ಹಿಡಿದುಕೊಂಡೆನೆಂಬ ಧೀರರೆಲ್ಲರ ಮತಿಯ ಬಗೆಯ ನುಂಗಿತ್ತು ಗುಹೇಶ್ವರಾ.