ವಚನ - 382     
 
ಭವಿಬೀಜವೃಕ್ಷದ ಫಲದೊಳಗೆ, ಭಕ್ತಿಬೀಜವೃಕ್ಷ ಪಲ್ಲವಿಸಿತ್ತು! ಭಕ್ತಿಬೀಜವೃಕ್ಷದ ಫಲದೊಳಗೆ, ಶರಣಬೀಜವೃಕ್ಷ ಪಲ್ಲವಿಸಿತ್ತು! ಶರಣಬೀಜವೃಕ್ಷದ ಫಲದೊಳಗೆ; ಕುಲನಾಶಕನಾದ ಶರಣ ಒಂದೆ ಬಸುರಲ್ಲಿ ಬಂದ. ಬಂದು, ಬಳಗಕ್ಕೆ ತನ್ನ ಕುಲಕ್ಕೆ ತಾನೆ ಮಾರಿಯಾದ ಶರಣ. ಭವಿಭಕ್ತ ಭವಿಬೀಜವೃಕ್ಷದ ತಂಪು ನೆಳಲ ಬಿಟ್ಟು, ಕುಳ್ಳಿರ್ದಲ್ಲಿಯೆ, ಬಳಿ ಬಳಿಯೆ ಬಯಲಾದ ಶರಣ! [ನಾದ]ಬಿಂದು ಬೀಜವಟ್ಟ ಹಾಳಾಗಿ ಹಾರಿಹೋದಲ್ಲಿ, ಇನ್ನೇನ ಹೇಳಲುಂಟು? ಗುಹೇಶ್ವರನೆಂಬ ಲಿಂಗವನರಿದು ಭವಿಗೆ ಭವಿಯಾದಾತಂಗೆ ಇನ್ನೇನು ಪಥವುಂಟಯ್ಯಾ?