ವಚನ - 413     
 
ಹೂ ಕೊಯ್ಯಹೋದಡೆ ಹೂ ದೊರಕೊಳ್ಳವು. ಅಗ್ಘವಣಿಯ ತುಂಬುವಡೆ ಅಗ್ಘವಣಿ ತುಂಬದು. ಪೂಜಿಸ ಹೋದಡೆ ಪೂಜೆ ನೆಲೆಗೊಳ್ಳದು. ಇದೇನು ಸೋಜಿಗವೊ ಅಯ್ಯಾ! ಅರಿದು ಮರೆದವನಲ್ಲ, ಬೆರಗು ಹಿಡಿದವನಲ್ಲ. ಗುಹೇಶ್ವರನೆಂಬ ಬುದ್ಧಿ ಇಂತುಟು.