ವಚನ - 422     
 
ಗಗನದ ಮೇಲೊಂದು ಸರೋವರ, ಆ ಜಲದಲ್ಲಿ ಮುಖವ ತೊಳೆದು ಹೂವ ಕೊಯ್ವವರೆಲ್ಲರೂ, ದೇವರಿಗೆ ಮುಖಮಜ್ಜನವನೆರೆದು, ಪೂಜಿಸಿ ಹೊಡವಂಟಡೆ ಒಮ್ಮೆ ನಾಯಕನರಕ ತಪ್ಪದಲ್ಲಾ! ದೇವಲೋಕದ ಪ್ರಮಥರ ಲಜ್ಜೆಯನೇನ ಹೇಳುವೆ ಗುಹೇಶ್ವರಾ.