ವಚನ - 456     
 
ಅಮೃತ ಸೇವನೆಯ ಮಾಡಿ ಆಪ್ಯಾಯನ ಘನವಾಯಿತ್ತು. ಪರುಷವೇದಿಯ ಸಾಧಿಸ ಹೋದಡೆ ದಾರಿದ್ರ್ಯ ಘನವಾಯಿತ್ತು. ಮರುಜೇವಣಿಯ ಹಣ್ಣ ಮೆದ್ದು, ಮರಣವಾಯಿತ್ತ ಕಂಡೆ. ಎಲ್ಲವನೂ ಸಾಧಿಸ ಹೋದಡೆ ಏನೂ ಇಲ್ಲದಂತಾಯಿತ್ತು. ನಾನು ನಿಜವ ಸಾಧಿಸಿ ಬದುಕಿದೆನು ಗುಹೇಶ್ವರಾ.