ವಚನ - 467     
 
ಧರೆಯ ಮೇಲುಳ್ಳ ಅರುಹಿರಿಯರೆಲ್ಲರೂ ಮರುಳುಗೊಂಡಾಡುತ್ತಿದ್ದಾರೆ ನೋಡಾ. ಮಂಜಿನ ಮಡಕೆಯೊಳಗೆ ರಂಜನೆಯ ಭಂಡವ ತುಂಬಿ ಅಂಜದೆ ಪಾಕವ ಮಾಡಿಕೊಂಡು ಉಂಡು, ಭಂಡವ ಮಾರುತ್ತಿರ್ಪರು ನೋಡಾ. ಸಂಜೀವನಿಯ ಬೇರ ಕಾಣದೆ ಮರಣಕ್ಕೊಳಗಾದರು ಗುಹೇಶ್ವರನನರಿಯದ ಭವಭಾರಕರೆಲ್ಲರು.