ವಚನ - 481     
 
ಭಕ್ತರೆಲ್ಲರೂ ಲಂದಣಿಗರಾಗಿ ಹೋಯಿತ್ತು. ಜಂಗಮಗಳೆಲ್ಲರೂ ಉಪಜೀವಿಗಳಾಗಿ, ಹೋದರು. ಇದೇನೊ? ಇದೆಂತೊ? ಅರಿಯಲೆ ಬಾರದು. ಕಾಯಗುಣ ನಾಸ್ತಿಯಾದಾತ ಭಕ್ತ, ಪ್ರಾಣಗುಣ ನಾಸ್ತಿಯಾದಾತ ಜಂಗಮ, ಉಳಿದವೆಲ್ಲವ ಸಟೆಯೆಂಬೆ ಗುಹೇಶ್ವರಾ.