ವಚನ - 488     
 
ಅರಿವಿನ ಬಲದಿಂದ ಕೆಲಬರು ಅರಿಯದವರ ಗೆಲಬೇಕೆಂದು, ಬರುಮಾತಿನ ಉಯ್ಯಲೆಯನೇರಿ, ಒದೆದು ಒರಲಿ ಕೆಡೆವ ದರಿದ್ರರು! ಅರಿವು ತೋರದೆ ಇರಬೇಕು, ಕಾಯನಿರ್ಣಯ ನಿಃಪತಿಯೆಂಬಾತನು. ಸೋಂಕಿನ ಸೋಜಿಗವೆಂಬ ಪರಿಣತೆ ಫಲಿಸಬೇಕು, ಅರಿವು ತೋರದೆ ಎರಡೆಂಬ ಭಿನ್ನವೇಷವ ತೊಟ್ಟು ಡಂಬಕವ ನುಡಿದೆಹೆವೆಂಬ ಉದ್ದಂಡರ ಗುಹೇಶ್ವರ ಕಂಡರೆ ಕನಲುವ.