ವಚನ - 530     
 
ಭಸ್ಮವ ಹೂಸಿ ಬತ್ತಲೆಯಿದ್ದಡೇನು ಬ್ರಹ್ಮಚಾರಿಯೇ? ಅಶನವನುಂಡು ವ್ಯಸನವ ಮರೆದಡೇನು? ಬ್ರಹ್ಮಚಾರಿಯೆ? ಭಾವ ಬತ್ತಲೆಯಿರ್ದು ಮನ ದಿಗಂಬರವಾಗಿರ್ದಡೆ ಅದು ಸಹಜ ನಿರ್ವಾಣವು ಕಾಣಾ ಗುಹೇಶ್ವರಾ.