ವಚನ - 563     
 
ಇಪ್ಪತ್ತೈದು ತತ್ತ್ವದ ಹತ್ತೆಂಬ ದ್ವಾರದಲ್ಲಿ ಬಳಲುವ ವ್ಯರ್ಥಗೇಡಿ ಮನವ ನಾನೇನೆಂಬೆನಯ್ಯಾ? ತನ್ನ ತಾ ತಿಳಿಯಲು ತನಗೆ ತಾನನ್ಯವಿಲ್ಲ ಮರುಳೆ ಮುತ್ತಯ್ಯನ ಬೆಣ್ಣೆಯ, ಶಿಶು ನುಂಗಿತ್ತು. ಮತ್ತೆ ಶಿಶುವಿನ ಸುಖವನೇನೆಂಬೆ ಗುಹೇಶ್ವರಾ?