ವಚನ - 568     
 
ಗಂಗಾದೇವಿಯ ಹುಳಿಯ ಕಾಸಿ, ಗೌರಿದೇವಿಯ ಕೂಳನಟ್ಟು, ಭಕ್ತನ ಬಾಡನಟ್ಟು, ದೇವನ ಸಾಸವೆಗಲಸಿ, ಬ್ರಹ್ಮನಡ್ಡಣಿಗೆ, ವಿಷ್ಣು ಪರಿಯಾಣ, ರುದ್ರನೋಗರ, ಈಶ್ವರ ಮೇಲೋಗರ, ಸದಾಶಿವ ತುಪ್ಪ; ಪರಮೇಶ್ವರ ಬಾಯಿ ಉಣಲಿಕ್ಕಿ ಕೈಕಾಲು ಮುರಿಯಿತ್ತು ಗುಹೇಶ್ವರಾ.