ವಚನ - 573     
 
ಹಸಿವಿಲ್ಲದೆ ಉಣಬಲ್ಲಡೆ, ಉಪಾಧಿಯಿಲ್ಲದೆ ಬೇಡಬಲ್ಲಡೆ, ಅದು ವರ್ಮ, ಅದು ಸಂಬಂಧ. ಗಮನವಿಲ್ಲದೆ ಸುಳಿಯಬಲ್ಲಡೆ, ನಿರ್ಗಮನಿಯಾಗಿ ನಿಲಬಲ್ಲಡೆ ಅದು ವರ್ಮ, ಅದು ಸಂಬಂಧ. ಅವರ ನಡೆ ಪಾವನ, ಅವರ ನುಡಿ ತತ್ತ್ವ, ಅವರ ಜಗದಾರಾಧ್ಯರೆಂಬೆ ಗುಹೇಶ್ವರಾ.