ವಚನ - 62     
 
ಜ್ಯೋತಿಯೊಳಗಣ ಕರ್ಪುರಕ್ಕೆ, ಅಪ್ಪುವಿನ ಕೈಯಲಿಪ್ಪ ಉಪ್ಪಿಂಗೆ, ಶ್ರೀಗುರುವಿನ ಹಸ್ತದೊಳಗಿಪ್ಪ ಶಿಷ್ಯಂಗೆ-ಈ ಮೂರಕ್ಕೆಯೂ ಬೇರೆ ಕ್ರಿಯಾವರ್ತನೆಯುಂಟೆ ಗುಹೇಶ್ವರಾ?