ವಚನ - 71     
 
ಎಣ್ಣೆ ಬೇರೆ ಬತ್ತಿ ಬೇರೆ: ಎರಡೂ ಕೂಡಿ ಸೊಡರಾಯಿತ್ತು. ಪುಣ್ಯ ಬೇರೆ ಪಾಪ ಬೇರೆ: ಎರಡೂ ಕೂಡಿ ಒಡಲಾಯಿತ್ತು. ಮಿಗಬಾರದು, ಮಿಗದಿರಬಾರದು, ಒಡಲಿಚ್ಛೆಯ ಸಲಿಸದೆ ನಿಮಿಷವಿರಬಾರದು. ಕಾಯಗುಣವಳಿದು ಮಾಯಾಜ್ಯೋತಿ ವಾಯುವ ಕೂಡುವ ಮುನ್ನ, ಭಕ್ತಿಯ ಮಾಡಬಲ್ಲಡೆ ಆತನೆ ದೇವ ಗುಹೇಶ್ವರಾ.