ವಚನ - 728     
 
ಅಂತರಂಗದಲ್ಲಿ ಅಡಗಿತ್ತೆಂದಡೆ ಭಾವಕ್ಕೆ ಪೂಜ್ಯವಲ್ಲ. ಬಹಿರಂಗದಲ್ಲಿ ಅಡಗಿತ್ತೆಂದಡೆ ಕ್ರಿಯಾಬದ್ಧವಲ್ಲ. ಅರಿವಿನೊಳಗೆ ಅಡಗಿತ್ತೆಂದಡೆ ಮತಿಗೆ ಹವಣಲ್ಲ. ಭಾವ ನಿರ್ಭಾವ ನಿಶ್ಶೂನ್ಯವನು ಕಾಂಬ ಪರಿ ಎಂತು ಹೇಳಾ? ಕಂಡು ತನ್ನೊಳಗಿಂಬಿಟ್ಟುಕೊಂಬ ಪರಿ ಎಂತು ಹೇಳಾ? ಗುಹೇಶ್ವರನೆಂಬ ಲಿಂಗವನರಿದು ಕೂಡಿ ಸುಖಿಯಹ ಪರಿ ಎಂತು ಹೇಳಾ ಸಂಗನಬಸವಣ್ಣ.