ವಚನ - 759     
 
ಅನಾದಿಯಲೊಬ್ಬ ಶರಣ; ಆಹ್ವಾನ ವಿಸರ್ಜನವಿಲ್ಲದ ಪರತತ್ತ್ವವ ಸ್ಥಾಪಿಸಿ ಪ್ರತಿಷ್ಠೆಯ ಮಾಡುವಲ್ಲಿ ಷಡುವರ್ಣಾತ್ಮಕ ಮೃಗಿ ಹುಟ್ಟಿದಳು ನೋಡಾ! ಆ ಮೃಗಿಯೊಳು ಪಂಚಾಂಗ ಪಂಚ ತಂಡದವರೆಲ್ಲ ಹುಟ್ಟಿ ವರ್ತಿಸಿ ಲಯವಾಗಿ, ಮತ್ತೆ ಪಲ್ಲವಿಸುತಿರ್ದರು ನೋಡಾ! ಆ ಪರತತ್ತ್ವದ ಲೀಲೆಯನು ಆ ಶರಣನೆ ಬಲ್ಲ ಗುಹೇಶ್ವರಾ.