ವಚನ - 798     
 
ಅಯ್ಯಾ!, ಮಣ್ಣಿಂಗೆ ಹೊಡೆದಾಡುವಾತನ ಗುರುವೆಂಬೆನೆ? ಆತ ಗುರುವಲ್ಲ. ಹೆಣ್ಣಿಂಗೆ ಹೊಡೆದಾಡುವಂತಾಂಗೆ ಲಿಂಗವೆಂಬೆನೆ? ಅದು ಲಿಂಗವಲ್ಲ. ಹೊನ್ನಿಂಗೆ ಹೊಡೆದಾಡುವಾತನ ಜಂಗಮವೆಂಬೆನೆ? ಆತ ಜಂಗಮವಲ್ಲ. ಈ ತ್ರಿವಿಧಮಲಕ್ಕೆ ಹೊಡೆದಾಡುವಾತನ ಶರಣನೆಂಬೆನೆ? ಆತ ಶರಣನಲ್ಲ ನೋಡಾ. ಈ ವಿಚಾರವನರಿದು, ಮಲತ್ರಯಂಗಳ ಸರ್ವಾವಸ್ಥೆಯಲ್ಲಿ ಹೊದ್ದಲೀಯದೆ ಗೌರವ ಬುದ್ಧಿ ಲಿಂಗಲೀಯ ಜಂಗಮಾನುಭಾವ ಸರ್ವಾಚಾರಸಂಪತ್ತಿನಾಚರಣೆಯ ಶ್ರುತಿ-ಗುರು-ಸ್ವಾನುಭಾವದಿಂದರಿದು ಆಚರಿಸಿದಡೆ, ಗುಹೇಶ್ವರಲಿಂಗದಲ್ಲಿ ಪರಾತ್ಪರ ಗುರುಲಿಂಗಜಂಗಮಶರಣನೆಂಬೆ ನೋಡ ಚೆನ್ನಬಸವಣ್ಣ.