ವಚನ - 821     
 
ಅರಿದರಿದು ನಿಮ್ಮ ನೆನೆವ ಪರಿಕರ ಹೊಸತು. ಅಲಗನೇರಿ ಹೂವ ಕೊಯ್ದು ಇಳಿದು ಬರುವಂತೆ, ಗುಹೇಶ್ವರಾ ನಿಮ್ಮ ಶರಣ ಚೆನ್ನಬಸವಣ್ಣಂಗಲ್ಲದೆ.