ವಚನ - 84     
 
ತಂದೆಯ ಸದಾಚಾರ ಮಕ್ಕಳದೆಂಬರು, ಗುರುಮಾರ್ಗಾಚಾರ ಶಿಷ್ಯನದೆಂಬರು. ಮೇಲು ಪಂಕ್ತಿಯ ಕಾಣರು ನೋಡಾ. ತತ್ತ್ವದ ಮೇಲು ಪಂಕ್ತಿ ಅತ್ತಲೆ ಉಳಿಯಿತ್ತು. ಕತ್ತಲೆಯ ಮರೆಯಲ್ಲಿ ಕಾಣರು ನೋಡಾ. ತತ್ತ್ವದ ಹಾದಿಯನು, ಭಕ್ತಿಯ ಭೇದವನು, ಇವರೆತ್ತ ಬಲ್ಲರಯ್ಯಾ ಗುಹೇಶ್ವರಾ.