ವಚನ - 851     
 
ಅಹುದಹುದು, ಬಸವಣ್ಣಾ ನೀನೆಂದುದನಲ್ಲೆನಬಹುದೆ? ಎನ್ನ ಮನದ ಕಪ್ಪ ಕಳೆದು ನಿರ್ಲೇಪನ ಮಾಡಿ ಎನ್ನ ನಿರವಯಲಲ್ಲಿ ನಿಲಿಸಿ ಪ್ರತಿಷ್ಠೆಯ ಮಾಡುವಾತನು ನೀನೆಂಬುದು ಸತ್ಯವಚನ ನೋಡಾ. ಗುಹೇಶ್ವರನ ಮಹಾಗಣಂಗಳಿದ್ದಲ್ಲಿಗೆ ಹೋಗಿ ತಿಳುಹಿಕೊಂಡು ಬಾರಾ ಸಂಗನಬಸವಣ್ಣಾ.