ವಚನ - 89     
 
ಉಲುಹಿನ ವೃಕ್ಷದ ನೆಳಲಡಿಯಲಿರ್ದು, ಗಲಭೆಯನೊಲ್ಲೆನೆಂಬುದೆಂತಯ್ಯಾ? ಪಟ್ಟದರಾಣಿಯ ಮುಖವ ಮುದ್ರಿಸಿ, ಮೆಟ್ಟಿ ನಡೆವ ಸತಿಯ ಶಿರವ, ಮೆಟ್ಟಿ ನಿಲುವ ಪರಿಯೆಂತಯ್ಯಾ? ಆದಿಯ ಹೆಂಡತಿಯನುಲ್ಲಂಘಿಸಿದ ಕಾರಣ, ಮೇದಿನಿಯ ಮೇಲೆ ನಿಲಬಾರದು. ಸಾಧಕರೆಲ್ಲರು ಮರುಳಾದುದ ಕಂಡು ನಾಚಿ ನಗುತ್ತಿರ್ದೆನು ಗುಹೇಶ್ವರಾ.