ವಚನ - 912     
 
ಆರು ಚಕ್ರದೊಳಗೆ ಆರುಭೂತಂಗಳೇರಿಪ್ಪವಯ್ಯಾ ಅವರೊಳಗೆ ಬ್ರಹ್ಮ ವಿಷ್ಣು ರುದ್ರ ಈಶ್ವರ ಸದಾಶಿವ ಆತ್ಮತತ್ತ್ವವೆಂಬ ಆರು ಅಧಿದೇವತೆಗಳಿಪ್ಪವಯ್ಯಾ. ಇಂತಪ್ಪ ಷಟ್ಕರ್ಮ ಸಾದಾಖ್ಯರ ಹಾನಿ ಮಾಡಿ ದಾಟುವರನೆ ಭಕ್ತಜಂಗಮವೆಂಬೆನು ಕಾಣಾ ಗುಹೇಶ್ವರಾ.