ವಚನ - 970     
 
ಎನ್ನಂತರಂಗವೆಂಬ ಭೂಮಿಯಲ್ಲಿ ಮಹಾಜ್ಞಾನವೆಂಬ ನಿಧಾನ ಭೂಗತವಾಗಿದ್ದಿತ್ತಯ್ಯಾ. ಶ್ರೀಗುರುವೆಂಬ ಅಂಜನಸಿದ್ಧನು ಬಂದು, ಎನ್ನ ಅದಕ್ಕೆ ಬಲೆಯನಿಕ್ಕಿ, ತನ್ನ ಕರುಣಾಮೃತವೆಂಬ ಮರುಜವಣಿಯ ಹಿಂಡಿ, ಆ ನಿಧಾನವನೆನಗೆ ಕರತಳಾಮಳಕವ ಮಾಡಿಕೊಟ್ಟನಯ್ಯಾ. ಗುಹೇಶ್ವರಾ, ನಿಮ್ಮ ಶರಣ ಅನಿಮಿಷನೆಂಬ ಶ್ರೀಗುರು.